ಕಾನ್ಪುರ: ಭಾರತ ಕದನ ವಿರಾಮ ಘೋಷಣೆ ಮಾಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ ಉಗ್ರರನ್ನು ನಾಶ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸಂದೇಶ ರವಾನಿಸಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶ ಮಾಡುವ ಮೂಲಕ ನಮ್ಮ ಸೇನೆಯು ಮಹತ್ವದ ಸಾಧನೆ ಮಾಡಿದೆ. ಇದರೊಂದಿಗೆ ಪಾಕಿಸ್ತಾನ ಸೇನೆಯು ಯುದ್ಧವನ್ನು ನಿಲ್ಲಿಸುವಂತೆ ಬೇಡಿಕೊಳ್ಳಬೇಕಾಯಿತು. ಸೇನೆಯ ಈ ಶೌರ್ಯಕ್ಕೆ ನಾನು ನಮಸ್ಕರಿಸುತ್ತೇನೆ! ಜೊತೆಗೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಬೇಡಿಕೊಳ್ಳುತ್ತಿದ್ದ ಶತ್ರು ರಾಷ್ಟ್ರವು ಯಾವುದೇ ಭ್ರಮೆಯಲ್ಲಿರಬಾರದು. ಯಾಕೆಂದರೆ ಈ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದರು.