ಗುಜರಾತ್ : ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲ ಎಂದು ಲಿಖಿತದಲ್ಲಿ ನೀಡಲಿ ಮತ್ತು ಸಂವಿಧಾನವನ್ನು ಹಾಳು ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಲಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.
ಬುಧವಾರ ಗುಜರಾತ್ನ ಬನಸ್ಕಾಂತ ಜಿಲ್ಲೆಯ ದೀಸಾ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ (Congress) ನವರಿಗೆ ಧೈರ್ಯವಿದ್ದರೆ, ಧರ್ಮದ ಹೆಸರಿನಲ್ಲಿ ಮೀಸಲಾತಿಯನ್ನು ಎಂದಿಗೂ ದುರುಪಯೋಗ ಪಡಿಸಿಕೊಳ್ಳುವುದಿಲ್ಲ ಎಂದು ಘೋಷಿಸಲಿ. ಸಂವಿಧಾನವನ್ನು ಹಾಳುಮಾಡುವುದಿಲ್ಲ, ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಲಿ ಎಂದು ವಾಗ್ದಾಳಿ ಮಾಡಿದ್ದಾರೆ.