ನವದೆಹಲಿ: ಆದಿವಾಸಿಗಳ ಅಭಿವೃದ್ಧಿಗಾಗಿ ಕೇಂದ್ರದ ನರೇಂದ್ರ ಮೋದಿ ಸರಕಾರ ಆರಂಭಿಸಿರುವ ಬುಡಕಟ್ಟು ನ್ಯಾಯ ಮಹಾ ಅಭಿಯಾನದ ಮೊದಲ ಕಂತು ಇಂದು ಫಲಾನುಭವಿಗಳ ಕೈ ಸೇರಲಿದೆ. ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಪ್ರಯೋಜನ ಸಿಗಲಿದೆ.
ಒಂದು ಲಕ್ಷ ಫಲಾನುಭವಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ವ್ಯಾಪ್ತಿಗೆ ಸೇರಲಿದ್ದಾರೆ. ಪಿಎಂ-ಜನ್ಮನ್ ಯೋಜನೆಯಡಿಯಲ್ಲಿ 4.90 ಲಕ್ಷ ಮನೆಗಳನ್ನು ಒದಗಿಸಲು ಅವಕಾಶವಿದೆ. ಪ್ರತಿ ಮನೆಗೆ 2.39 ಲಕ್ಷ ರೂಪಾಯಿ ಹಣವನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ ಸಿಗಲಿದೆ.
ಸಮಾಜದ ಬಡವರು, ಹಿಂದುಳಿದವರು ಮತ್ತು ವಂಚಿತ ವರ್ಗಗಳ ಸಬಲೀಕರಣ ಆಗಬೇಕು ಎನ್ನುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬುಡಕಟ್ಟು ನ್ಯಾಯ ಮಹಾ ಅಭಿಯಾನದ ಮೊದಲ ಕಂತನ್ನು ಬಿಡುಗಡೆ ಮಾಡಲಿದೆ.