ಬೆಂಗಳೂರು : ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ದುರ್ಘಟನೆ ನಡೆದಿದ್ದು ಜಿಗಣಿ ಮೂಲದ 65 ವರ್ಷದ ಕಾರ್ಮಿಕ ಗುರುವಪ್ಪ ಎಂಬುವರು ಸಾವನ್ನಪ್ಪಿದ್ದಾರೆ .
ವಿದ್ಯುತ್ ಸಂಪರ್ಕಕ್ಕೆ ಬಂದು ಕಾರ್ಮಿಕ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದುರಾದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಕಾರ್ಮಿಕ ಗುರುವಪ್ಪ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಕಾರ್ಮಿಕನಿಗೆ ನಮ್ಮ ಮೆಟ್ರೋ ಸಂತಾಪ ಸೂಚಿಸಿದೆ. ಜೊತೆಗೆ ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕನ ಸಾವಿನ ಬಗ್ಗೆ ತನಿಖೆ ನಡೆಸಲು ಮುಂದಾಗಿದೆ.
