ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದು,
ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದರು. ಬಳಿಕ ಸರ್ಕಾರದಿಂದ 25 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.
ಕೇರಳದಲ್ಲಿ ಆನೆ ತುಳಿತದಿಂದ ಸಾವನ್ನಪ್ಪಿದವರಿಗೆ 25 ಲಕ್ಷ ಪರಿಹಾರ, ಆದರೆ ನಮ್ಮ ರಾಜ್ಯದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ಪರಿಹಾರ ಎಂದು ಟೀಕೆ ವ್ಯಕ್ತವಾಗಿತ್ತು.